Labels

Tuesday, 17 December 2019

ಅಪರಾಧವೆಣಿಸದಲೆ ಕಾಯಬೇಕು aparaadhvenisadale kaayabeko

ಅಪರಾಧವೆಣಿಸದಲೆ ಕಾಯಬೇಕು
ಕೃಪಣವತ್ಸಲನೆ ಶ್ರೀ ಮಧ್ವಮುನಿ ಗುರುರಾಯ ||pa||
ನೀ ಮಾಡಿದುಪಕಾರ ನಾ ಮರೆವುದೆಂತೋ ಲ
ಕ್ಷ್ಮೀ ಮನೋಹರನ ನಿಜದಾಸಾಗ್ರಣೀ
ಪಾಮರನ ಲೋಕದೊಳು ಧೀಮಂತನೆನಿಸಿದೆ ಮ
ಹಾಮಹಿಮ ನಿನ್ನ ಕರುಣಾಮೃತದ ಮಳೆಗರೆದೂ ||1||
ಅವಿವೇಕಿ ನಾನು ನಿನ್ನವನೆಂದು ತಿಳಿದು ಎ
ನ್ನವಗುಣಗಳೆಣಿಸದೆ ನಿತ್ಯದಲ್ಲಿ
ಸುವಿವೇಕಿಯನೆ ಮಾಡು ಕವಿವರ್ಯ ತವ ಮನೋ
ತ್ಸವಕೆ ಎಣೆಗಾಣೆ ನಾನವನಿಯೊಳಗಾವಲ್ಲಿ ||2||
ಏನರಿಯದ ಮೂಢ ಮಾನವನು ನಾನು
ಸುಜ್ಞಾನ ವರ್ಯನು ನೀನೆ ಕಾಯಬೇಕು
ಮಾನುತ ಜಗನ್ನಾಥ ವಿಠಲನ ಪದಯುಗಳ ಸ
ಧ್ಯಾನ ಮಾಡುವ ಧೀರಪ್ರಾಣ ಪಂಚಕರಾಯ ||3||

No comments:

Post a Comment