Labels

Tuesday, 17 December 2019

ಶ್ರೀಮದಾನಂದ ತೀರ್ಥರೆಂಬ shrimadanand teerthrembo

ಶ್ರೀಮದಾನಂದ ತೀರ್ಥರೆಂಬ |ಅರ್ಥೀಯ ಪೆಸರುಳ್ಳ |ಗುರುಮಧ್ವಮುನಿರಾಯ
|ಏನೆಂಬೆ ನಾನಿನ್ನ ಕರುಣಕೆ ಎಣೆಗಾಣೆ ಪ||
ಬ್ಯಾಸರದೆ ಸರ್ವರಲ್ಲಿ |ಶ್ವಾಸ ಜಪಗಳ ಮಾಡಿಗುಂ |
ಶ್ರೀಶಗರ್ಪಿಸುತ ಹರಿ |ದಾಸರನ್ನು ಪಾಲಿಸಿದೆ ||
ಅಂದು ಹನುಮಂತನಾಗಿಬಂದು ಸುಗ್ರೀವಗೆ ಗುರುಂ |
ಅಂದವಾದ ಪದವಿತ್ತಾ |ನಂದವನು ಬಡಿಸಿದೆ ಗುರುಂ ||
ಕುಂತಿಯ ಕುಮಾರನಾಗಿ |ಹಂತ ಕೌರವರನ ಕೊಂದಿ ಗುರುಂ |
ಅಂತು ಪುಣ್ಯವ ಶ್ರೀ |ಕಂತು ಪಿತಗರ್ಪಿಸಿದೆಯೋ ||
ಅದ್ವೈತರನು ಕಾದಿ |ಗೆದ್ದು ನಿನ ಭಕ್ತರಿಗೆ ಗುರುಮಧ್ವಮುನಿರಾಯ |
ಶುದ್ಧ ತಾತ್ಪರ್ಯ ವಾಕ್ಯ |ಪದ್ಧತಿಯ ತಿಳಿಸಿದಿ ಗುರುಂ ||
ಗುರುಪ್ರಾಣೇಶ ವಿಠಲಾಪರನೆಂದು ಡಂಗುರವ ಗುರುಂ |
ಸಾರಿಸಿ ಸಜ್ಜನರನ್ನು |ಹರಿಲೋಕ ಸೇರಿಸಿದಿ ಗುರುಂ ||

No comments:

Post a Comment