ವಾಸುದೇವ ನಿನ್ನ ವರ್ಮ ಕರ್ಮಂಗಳ
ದೇಶ ದೇಶದೊಳು ಹೇಳಲೆ ? ಪ
ಬೇಸರಿಯದೆ ಎನ್ನ ಹೃದಯ ಕಮಲದಲ್ಲಿ
ವಾಸವಾಗಿ ಸುಮ್ಮನಿರುವೆಯೊ ? ಅ.ಪ
ಮತ್ಸರೂಪನಾಗಿ ಮನಸು ಕಾಣಿಸಿಕೊಂಡು ಮಕ್ಕಳತಿದ್ದಿದ್ದು ಹೇಳಲೆ ?
ಉತ್ಸಾಹದಿಂದ ನಿಗಮವ ತಂದು ಬ್ರಹ್ಮಗೆಮೆಚ್ಚಿಕೊಟ್ಟದ್ದು ನಾ ಹೇಳಲೆ1
ಕಡಗೋಲು ಮಂಡೆಯಂದದಿ ಕೈಕಾಲುಮುದುಡಿಕೊಂಡದ್ದು ನಾ ಹೇಳಲೆ ?
ಕಡಲೊಳಗಿಂದ ಪಾತಾಳಕೆ ಇಳಿದಿಳೆ ಪಡೆದಾತನ ಸುದ್ದಿ ಹೇಳಲೆ 2
ಹುಚ್ಚುಮನಸುಮಾಡಿ ಕಚ್ಚುತ ಕೆದರುತ ರಚ್ಚೆಯಿಕ್ಕಿದಸುದ್ದಿ ಹೇಳಲೆ ?
ಮುಚ್ಚಿದ ಭೂಮಿಯ ಹಲ್ಲಿಂದ ಕಿತ್ತಿದ ಹೆಚ್ಚುತನವ ನಾನು ಹೇಳಲೆ3
ಕಂದನ ಮಾತಿಗೆ ಕಡುಕೋಪದಿಂ ಬಂದು ಕಂಬವನೊಡೆದದ್ದು ಹೇಳಲೆ ?
ಕುಂದದೆ ಹಿರಣ್ಯಕಶಿಪುವಿನುದರ ಸೀಳಿ ಕರುಳ್ಮಾಲೆಧರಿಸಿದ್ದು ಹೇಳಲೆ 4
ಬಾಲನಾಗಿ ಬ್ರಹ್ಮಚಾರಿ ವೇಷವ ತೋರಿ ಬಲಿಯಬೇಡಿದುದನು ಹೇಳಲೆ ?
ಲೀಲೆಯಿಂದಲಿ ಧರೆಯ ಈರಡಿ ಮಾಡಿದ ಜಾಲತನ್ವನುನಾನು ಹೇಳಲೆ 5
ಹೆಸರಿಲ್ಲದೆ ಹೋಗಿ ಹೆತ್ತತಾಯ್ ತಲೆಕುಟ್ಟಿ ಕೊಡಲಿಯಪಿಡಿದದ್ದು ಹೇಳಲೆ ?
ಸೋಸಿ ದೈತ್ಯರನೆಲ್ಲ ರೋಸಿ ಪ್ರಾಣವ ಕೊಂಡದೋಷತನವ ನಾನು ಹೇಳಲೆ6
ತಾಯ ಮಾತನೆ ಕೇಳಿ ತಮ್ಮನ ಒಡಗೂಡಿಅಡವಿಯೊಳಿದ್ದುದು ಹೇಳಲೆ ?
ಮಾಯಾಸೀತೆಗಾಗಿ ರಾವಣನನು ಕೊಂದು ಮಹಿಮೆಯ ನೆರೆದದ್ದು ಹೇಳಲೆ ?7
ತರಳತನದಲಿ ದುರುಳನಾಗಿ ಬಂದ ಒರಳೆಳೆತಂದದ್ದು ಹೇಳಲೆ
(ಬೆರಳಿಂದ ಗಿರಿಯೆತ್ತಿ ಕಂಸನ ಕೊಂದ ಆ ) ದುರುಳತನದಸುದ್ದಿ ಹೇಳಲೆ8
....................................................................................
..........................................................................................9
ರಾಯ ರಾವುತನಾಗಿ ರಾಯರ ಮನೆ ಪೊಕ್ಕು ಕಡುಗವಪಿಡಿದದ್ದು ಹೇಳಲೆ ?
ಆಯತದಿಂದ ಕಲಿಯಲಿದ್ದು ಮನುಜರ ಮಾಯವತೋರಿದ್ದು ಹೇಳಲೆ10
ಧರೆಯೊಳಗಧಿಕವಾದ ಉರಗಗಿರಿಯಲ್ಲಿ ಸ್ಥಿರಿವಾಗಿನಿಂತದ್ದು ಹೇಳಲೆ ?
ಕರುಣದಿಂ ಭಕುತರ ಹೊರೆವ ಪುರಂದರವಿಠಲನೆಂದು ನಾ ಹೇಳಲೆ 11*
No comments:
Post a Comment