Labels

Saturday 25 January 2020

ಆವ ಜನುಮದ ಸುಕೃತ ಫಲಿಸಿತೆನಗೆ aava kannada sukrata


ಆವ ಜನುಮದ ಸುಕೃತ ಫಲಿಸಿತೆನಗೆ
ಕೋವಿದಾಗ್ರಣಿ ವ್ಯಾಸತತ್ವಜ್ಞರ ಕಂಡೆ ಪ
ಜೀವ ಸಾಮಾನ್ಯವೆಂದರಿಯದಿಲಿ ಶಾಸ್ತ್ರಗಳ
ನಾವಲೋಕನದಿ ಪೇಳ್ವರು ನಿತ್ಯದಿ
ದೇವಾಂಶರಿವರು ಸಂಶಯವು ಬಡಸಲ್ಲ ಮಾ
ಯಾ ವಲ್ಲಭನು ಇವರ ಹೃದಯದೊಳಗಿರುತಿಪ್ಪ 1
ಕವಿ ಭರಿಡಿತ ಮಹಾಮುನಿ ವ್ಯಾಸಕೃತ ಸುಭಾ
ಗವತಾದಿ ಗ್ರಂಥ ವ್ಯಾಖ್ಯಾನ ನೋಡಿ
ಭುವನೇಂದ್ರರಾಯರ ಕರುಣದಲಿ ತುರೀಯಾ ಶ್ರ
ಮನವಿತ್ತು ವ್ಯಾಸತತ್ವಜ್ಞ ರಹುದೆಂದು 2
ಈ ಜಗತ್ರಯ ದೊಳಗೆ ಪೂಜ್ಯ ಪೂಜಕರ ನಿ
ವ್ರ್ಯಾಜದಲಿ ತಳುಪಿದನು ಭಕ್ತಜನಕೆ
ಶ್ರೀ ಜಗನ್ನಾಥ ವಿಠಲನೊಬ್ಬ ಪೂಜ್ಯ ಪಂ
ಕೇಜ ಭವ ಭವರು ಪೂಜಕರೆಂಬುವರ ನೋಡ್ಡೆ 3


No comments:

Post a Comment