Labels

Wednesday 15 January 2020

ದಯೆಮಾಡಿ ಸಲಹಯ್ಯ ಭಯನಿವಾರಣನೆ | daamaad salahayya


ದಯೆಮಾಡಿ ಸಲಹಯ್ಯ ಭಯನಿವಾರಣನೆ |
ಹಯವದನ ನಾ ನಿನ್ನ ಚರಣ ನಂಬಿದೆ ಕೃಷ್ಣ ಪ
ಕ್ಷಣಕ್ಷಣಕೆ ನಾ ಮಾಡಿದಂಥ ಪಾಪಗಳೆಲ್ಲ |
ಎಣಿಸಲಳವಲ್ಲಷ್ಟು ಇಷ್ಟು ಎಂದು ||
ಫಣಿಶಾಹಿ ಅವಗುಣವ ನೋಡದೇ ಚರಣ ಸ್ಮ-
ರಣೆಯ ಮಾಡುವಂಥ ಭಕುತಿಯನಿತ್ತು 1
ಕಂಡ ಕಂಡ ಕಡೆಗೆ ಪೋಪ ಚಂಚಲಮನಸು
ಲಂಡತನದಲಿ ಬಹಳ ಭ್ರಷ್ಟ ನಾನು ||
ಭಂಡಾಟದವನೆಂದು ಬಹಿರಂಗಕೆಳೆಯದೆ |
ಕೊಂಡಾಡುವಂಥ ಭಕುತಿಯನಿತ್ತು ಸಲಹಯ್ಯ 2
ಜಾತಿಧರ್ಮವ ಬಿಟ್ಟು ಅಜಮಿಳನು ಇರತಿರಲು |
ಪ್ರೀತಿಯಿಂದಲಿ ಮುಕುತಿಕೊಡಲಿಲ್ಲವೆ ||
ಖ್ಯಾತಿಯನು ಕೇಳಿ ಮೊರೆಹೊಕ್ಕೆ ದಯಾನಿಧಿಯೆ -ಬೆ-|ನ್ನಾತು ಕಾಯಯ್ಯ ಶ್ರೀ ಪುರಂದರವಿಠಲ 3


No comments:

Post a Comment