Labels

Thursday 16 January 2020

ಕಂಡೆ ಕಂಡೆ ಸ್ವಾಮಿಯ ಬೇಡಿಕೊಂಡೆ kande knade swamiya bedikonde

ಕಂಡೆ ಕಂಡೆ ಸ್ವಾಮಿಯ ಬೇಡಿಕೊಂಡೆ                                             ||ಪ||
ಕಂಡೆ ತಿರುಪತಿ ವೆಂಕಟೇಶನ ಕಾರಣಾತ್ಮಕ ಸಾರ್ವಭೌಮನ
ಕಾಮಿತಾರ್ಥಗಳೀವ ದೇವನ ಕರುಣಾನಿಧಿ ಎಂದೆನಿಸಿ ಮೆರೆವನ            ||ಅ.ಪ||
ಕೋಟಿಸೂರ್ಯ ಪ್ರಕಾಶವೆನಿಪ ಕಿರೀಟವನು ಮಸ್ತಕದಿ ಕಂಡೆನು
ನೋಟಕಾಶ್ಚರ್ಯವಾದ ನಗೆಮುಖನೊಸಲಿನಲಿ ತಿರುಮಣಿಯ ಕಂಡೆನು
ಸಾಟಿಯಿಲ್ಲದೆ ಚತುರ ಹಸ್ತದಿ ಶಂಖಚಕ್ರಗದಾಬ್ಜ ಕಂಡೆನು
ಬೂಟಕದ ಮಾತಲ್ಲ ಕೇಳಿರೋ ಭೂರಿದೈವರ ಗಂಡನಂಘ್ರಿಯ              ||೧||
ತಪ್ಪುಕಾಣಿಕೆ ಕಪ್ಪವನು ಸಮಸ್ತದ್ವೀಪಗಳಿಂದಲಿ ತರಿಸುವ
ಉಪ್ಪು ಓಗರಗಳನೆ ಮಾರಿಸಿ ಉಚಿತದಿಂದಲಿ ಹಣವ ಗಳಿಸುವ
ಇಪ್ಪತ್ತು ದುಡ್ಡಿಗೆ ಸೇರು ತೀರ್ಥ ಒಪ್ಪದಲಿ ಕ್ರಯ ಮಾಡಿ ಕೊಡಿಸುವ
ಸರ್ಪಶಯನ ಸಾರ್ವಭೌಮನ ಅಪ್ಪ ವೆಂಕಟರಮಣನಂಘ್ರಿಯ             ||೨||
ಉರದಿ ಶ್ರೀ ದೇವಿಯಳ ಕಂಡೆನು ಉನ್ನತದ ಕೌಸ್ತುಭವ ಕಂಡೆನು
ಗರುಡ ಕಿನ್ನರನಾರದಾದಿ ಗಂಧರ್ವರ ಎಡಬಲದಲಿ ಕಂಡೆನು
ತರತರದಿ ಭಕ್ತರಿಗೆ ವರಗಳ ಕರೆದು ಕೊಡುವುದ ನಿರತ ಕಂಡೆನು
ಶರಧಿಶಯನನ ಶೇಷಗಿರಿಯ ವರದ ಪುರಂದರವಿಠಲನಂಘ್ರಿಯ           ||೩||

No comments:

Post a Comment