Labels

Wednesday 15 January 2020

ನಂಬಿ ಕೆಟ್ಟವರುಂಟೆ - ಕೃಷ್ಣಯ್ಯನ nambi kettavarunte


ನಂಬಿ ಕೆಟ್ಟವರುಂಟೆ - ಕೃಷ್ಣಯ್ಯನ |
ನಂಬಲಾರದೆ ಕೆಟ್ಟರು ಪ.
ಅಂಬುಜನಾಭನ ಪಾದವ ನೆನೆದರೆ |
ಇಂಬುಗೊಡದ ದುಃಖ ಹರಿಸುವ ಶ್ರೀ ಕೃಷ್ಣ ಅಪ
ಬಲಿಯ ಪಾತಾಳಕಿಳುಹಿ - ಭಕ್ತನ ಬಾ - |
ಗಿಲವ ಕಾಲುವೆ ನಾನೆಂದ ||
ಛಲದೊಳು ಅಸುರರ ಶಿರಗಳ ತರಿದು ತಾ |
ನೊಲಿದು ವಿಭೀಷಣಗೆ ಪಟ್ಟಗಟ್ಟಿದ ಈ ಕೃಷ್ಣ 1
ತರಳ ಪ್ರಹ್ಮಾದಗೊಲಿದು - ಹಿರಣ್ಯಕನ ಉ - |
ಗುರಿನಿಂದಲೆ ಸೀಳಿದ |
ಕರಿರಾಜಗೊಲಿದು ನೆಗಳು ನುಂಗುತಿರಲಾಗ ||
ಪರಿಹರಿಸಿದ ಜಲದೊಳು ಪೊಕ್ಕು ಶ್ರೀ ಕೃಷ್ಣ 2
ಪಾಂಡವರಿಗೆ ಒಲಿದು - ಕೌರವರನು |
ತುಂಡು ಛಿದ್ರಮಾಡಿದೆ ||
ಗಂಡರೈವರ ಮುಂದೆ ದ್ರೌಪದಿ ಕೂಗಲು |
ಕಂಡು ಕರುಣದಿ ಕಾಯ್ದ ಪುರಂದರವಿಠಲನ 3


No comments:

Post a Comment