Labels

Thursday 16 January 2020

ಶ್ರೀನಿವಾಸ ನೀನೆ ಪಾಲಿಸೊ shrinivasa neene Paaliso

ಶ್ರೀನಿವಾಸ ನೀನೆ ಪಾಲಿಸೊ ಶ್ರಿತಜನಪಾಲ
ಗಾನಲೋಲ ಶ್ರೀ ಮುಕುಂದನೆ

ಧ್ಯಾನಮಾಳ್ಪ ಸಜ್ಜನರ ಮಾನದಿಂದ ಪರಿಪಾಲಿಸುವ
ವೇಣುಗೋಪಾಲ ಗೋವಿಂದ ವೇದವೇದ್ಯ ನಿತ್ಯಾನಂದ

ಎಷ್ಟು ದಿನ ಕಷ್ಟಪಡುವುದೋ ಯಶೋದೆ ಕಂದ
ದೃಷ್ಟಿಯಿಂದ ನೋಡಲಾಗದೆ
ಮುಟ್ಟಿ ನಿನ್ನ ಭಸಿಸಲಾರೆ, ಕೆಟ್ಟ ನರಜನ್ಮದವ
ದುಷ್ಟ ಕಾರ್ಯ ಮಾಡಿದಾಗ್ಯೂ ಇಷ್ಟನಾಗಿ ಕೈಯ ಪಿಡಿಯೋ

ಎಂದಿಗೆ ನಿನ್ನ ಪಾದಾಬ್ಜವ ಪೊಂದುವ ಸುಖ
ಎಂದಿಗೆ ಲಭ್ಯವೊ ಮಾಧವ
ಅಂಧಕಾರಣ್ಯದಲಿ ನಿಂದು ತತ್ತರಿಸುತಿಹೆನೊ
ಅಂದದಿಂ ಭವಾಬ್ದಿಯೊಳು ನಿಂದು ನೊಂದೆನೊ ಗೋವಿಂದ

ಅನುದಿನ ಅನೇಕ ರೋಗಗಳ ಅನುಭವಿಸಿದೆನು
ಘನ ಮಹಿಮನೆ ಕೇಳಯ್ಯ
ತನುವಿನಲಿ ಬಲವಿಲ್ಲ ನೆನೆದ ಮಾತ್ರದಿ ಸಲಹೊ ಯೆನ್ನ
ಹನುಮದೀಶ ಪುರಂದರವಿಟ್ಠಲನೆ ಕೈಯ ಪಿಡಿದು

No comments:

Post a Comment