Labels

Wednesday 20 May 2020

ನಂಬಿ ಕೆಟ್ಟವರುಂಟೆ - ಕೃಷ್ಣಯ್ಯನ |ನಂಬಲಾರದೆ ಕೆಟ್ಟರು ಪ. nambi kettavarunte


ನಂಬಿ ಕೆಟ್ಟವರುಂಟೆ ಕೃಷ್ಣಯ್ಯನ ನಂಬಲಾರದೆ ಕೆಟ್ಟರು \\ಪ.\\
ಅಂಬುಜನಾಭನ ಪಾದವ ನೆನೆದರೆ ಇಂಬುಗೊಡದ ದುಃಖ ಹರಿಸುವ ಶ್ರೀ ಕೃಷ್ಣ\\ ಅಪ\\
ಬಲಿಯ ಪಾತಾಳಕಿಳುಹಿ - ಭಕ್ತನ ಬಾಗಿಲವ ಕಾಲುವೆ ನಾನೆಂದ ||
ಛಲದೊಳು ಅಸುರರ ಶಿರಗಳ ತರಿದು ತಾನೊಲಿದು ವಿಭೀಷಣಗೆ ಪಟ್ಟಗಟ್ಟಿದ ಈ ಕೃಷ್ಣ \\1\\
ತರಳ ಪ್ರಹ್ಮಾದಗೊಲಿದು - ಹಿರಣ್ಯಕನ ಉಗುರಿನಿಂದಲೆ ಸೀಳಿದ |
ಕರಿರಾಜಗೊಲಿದು ನೆಗಳು ನುಂಗುತಿರಲಾಗ ಪರಿಹರಿಸಿದ ಜಲದೊಳು ಪೊಕ್ಕು ಶ್ರೀ ಕೃಷ್ಣ \\2\\
ಪಾಂಡವರಿಗೆ ಒಲಿದು  ಕೌರವರನು ತುಂಡು ಛಿದ್ರಮಾಡಿದೆ ||

ಗಂಡರೈವರ ಮುಂದೆ ದ್ರೌಪದಿ ಕೂಗಲು ಕಂಡು ಕರುಣದಿ ಕಾಯ್ದ ಪುರಂದರವಿಠಲನ 3

No comments:

Post a Comment