Labels

Saturday 6 June 2020

ನೆಚ್ಚಬೆÉೀಡ ಭಾಗ್ಯವನು necchabeda bhagyavanu


ನೆಚ್ಚಬೆÉೀಡ ಭಾಗ್ಯವನು ಹುಟ್ಟುಗೊಂಡ ಮನುಜಾ
ವೆಚ್ಚವಾಗಿ ಹೋಗುವುದು ಏಸೊಂದು ಬಗೆಯಲಿ ಪ.
ಮುತ್ತು - ಮಾಣಿಕ - ನವರತ್ನದ ಗದ್ದುಗೆಯು
ಎತ್ತ ನೋಡಲು ಸಿರಿಕೋ ಎನುತಲಿ
ಸತ್ಯ ಹರಿಶ್ಚಂದ್ರ ಮತ್ತೆ ಸುಡುಗಾಡಿನಲ್ಲಿ
ಎತ್ತುವ ಹಣೆಯಕ್ಕಿ ಹಾಗದ ಕಾಸ 1
ದೇವತೆಗಳ ಕೈಯ ಸೇವೆಯ ಕೊಳುತಿರ್ದ
ರಾವಣನ ಬದುಕು ಮತ್ತೇನಾಯಿತು?
ಜೀವದ ಪರಿಯರಿತು ನಾವು ದೊರೆಯೆಂಬುವುದೆ
ಸಾವಿನ ಮನೆಹೊಕ್ಕು ಸಾಹಸ ಪಡಲೇಕೆ 2
ಹದಿನೆಂಟುಕೋಟಿ ಧನ ಉದಯಕೆ ಬರುತಿರಲು
ಒದಗಿತೆ ಆ ರಾಶಿ ದಿನ ಕರ್ಣಗೆ ?
ತುದಿ ಮಧ್ಯಾಹ್ನಕ್ಕೆ ದರಿದ್ರನೆನಿಸುವ
ಇದರಿಂದ ಕಡೆಗಂಡರಾರು ಜಗದೊಳಗೆ ? 3
ಬೆಳ್ಳಿಯ ಗಿಣಿಲು ಬಂಗಾರದ ಹರಿವಾಣ
ಕುಳಿತಲ್ಲಿ ಕನಕದ ರಾಶಿಗಳು
ಗಳಿಗೆಗೆ ಈ ಭಾಗ್ಯ ಕಾಳಬೆಳುದಿಂಗಳು
ಉಳಿದವು ನಾ ಕಾಣೆ ಚಿರಲಕ್ಷ್ಮಿಯೆನಲು 4
ಇಂತು ಈ ಪರಿಯಲನಂತರು ಹೋದರು
ಎಂತು ಪೇಳಲಿ ಅವರ ಪೆಸರುಗಳ ?
ಚಿಂತಾಯತ ಶ್ರೀ ಪುರಂದರವಿಠಲನ
ಸಂತತ ಪಾದಕಮಲವ ಭಜಿಸೊ ಮನುಜಾ 5


No comments:

Post a Comment