Labels

Friday 5 June 2020

ನಾರಾಯಣಾಯ ನಮೋ ನಾಗೇಂದ್ರ naarayanaya namo naagendra


ನಾರಾಯಣಾಯ ನಮೋ ನಾಗೇಂದ್ರ ಶಯನಾಯ |ನಾರದಾದ್ಯಖಿಳ ಮುನಿನಮಿತ ಪಾದಾಂಭೋಜ |ಸೇರಿದರೆ ಪೊರೆವ ಕಂಸಾರಿ ರಕ್ಷಿಪನೆಮ್ಮ |ಕಾರುಣ್ಯದಿಂದ ಒಲಿದು ಪಪಾಂಡ್ಯದೇಶದೊಳು ಇಂದ್ರದ್ಯುಮ್ನನೆಂಬ ಭೂ |ಮಂಡಲಾಧಿಪನು ವೈರಾಗ್ಯದಲಿ ಹರಿಪಾದ |ಪುಂಡರೀಕಧ್ಯಾನಪರನಾಗಿ ತಪದೊಳಿರೆಚಂಡತಾಪಸನಗಸ್ತ್ಯ ||ಹಿಂಡು ಶಿಷ್ಯರುವೆರೆಸಿ ಬರಲು ಸತ್ಕರಿಸದಿರೆ |ಕಂಡುಗ್ರಶೋಪದಿಂ ಗಜವಾಗಿ ಜನಿಸಲು |ದ್ದಂಡ ಶಾಪವನಿತ್ತು ಮುನಿ ತಿರುಗತ್ತಲೈಶುಂಡಾಲನಾದನರಸ 1
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದ ನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥ ಪೂಗ ಪುನ್ನಾಗ ಜಂ |ಬೀರ ತರು ಗುಲ್ಮ ಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2
ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಆನೆಗಳು ಬಾಯ್ದೆರೆದು ನುಂಗಿತೊಂದಂಘ್ರಿಯನುಏನೆಂಬೆನಾಕ್ಷಣದೊಳು 3
ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತ ಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆ ನೆಗಳೆ ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4
ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜ್ಞಾನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದ ಮಾಧವ ಕೃಷ್ಣ ನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದು ಸಿಲ್ಕಿದೆನು ಬಲು ದಂದುಗದ ಮಾಯಾ ಪ್ರ-ಬಂಧಕನೆ ನೆಗಳಿನಿಂದ 5
ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿ ಪರಮ ಪಾವನಮೂರ್ತಿ |ಪರಮೇಷ್ಟಿ ಪರಬ್ರಹ್ಮ ಪರಮ ಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕ ನಿರ್ಗುಣ ನಿರಂಜನ ನಿರಾಧಾರ |ನಿರವದ್ಯ ನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ಚಿಂತ್ಯ ಮಹಿಮನು ಕೇಳಿ ಕರುಣದಿಂದಾ ಮಹಾ-ನಂತಶಯನದೊಳೆದ್ದನು ||ಸಂತವಿಡುತುಡೆ- ಮುಡಿಯ ಗರುಡನೇರದೆ ಬಂದು |ಚಿಂತೆ ಬೇಡೆನುತಭಯಹಸ್ತವನು ಕೊಡುತ ಶ್ರೀ- |ಕಾಂತ ಭಕ್ತನ ಬಳಿಗೆ ಬಂದೆಡದ ಕೈಯಿಂದದಂತಿವರನನು ನೆಗಹಿದ 7

ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದ ನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿ ಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8
ಮಣಿಮುಕುಟ ಕುಂಡಲ ಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿ ಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹ ಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯ ಜಯಾ ಎಂಬ ಸುರನರರಸಂ- |ದಣಿಯಿಂದೆ ಹರಿ ಮೆರೆದನು 9
ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜ ಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ತರಣಿ ಶಶಿ ನವಶಕ್ತಿ ವಿಷ್ಣಧರ್ಮವತಾರು- |ಪರ ವರಗದಾ ಶಂಖ ಚಕ್ರಾಂಬುಜಂಗಳನುಸ್ಮರಿಸುವರ ಕಾವೆನೆಂದ 10
ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙÁ್ಞನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜ್ಞಾನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದ ಪುರಂದರ ವಿಠಲನಸೇವಕರಿಗಿದುಚಿತ್ರವೆ 11


No comments:

Post a Comment