Labels

Friday 5 June 2020

ನಾರಾಯಣ ಗೋವಿಂದ narayana govinda


ನಾರಾಯಣ ಗೋವಿಂದ - ಹರಿಹರಿ
ನಾರಾಯಣ ಗೋವಿಂದ ಪ
ನಾರಾಯಣ ಗೋವಿಂದ ಮುಕುಂದ
ಪರತರ ಪರಮಾನಂದ ಅ.ಪ
ಮೊದಲು ಮತ್ಸ್ಯನಾಗಿ ಉದಿಸಿ ಸೋಮನನು
ಸದೆದು ವೇದಗಳ ತಂದ 1
ಮಂದರಗಿರಿಯಲಿ ಸಿಂಧುಮಥಿಸಿ ಸುಧೆ
ತಂದು ಭಕ್ತರಿಗುಣಲೆಂದ 2
ಭೂಮಿಯ ಕದಿದಾ ಖಳನನು ಮರ್ದಿಸಿ
ಆ ಮಹಾಸತಿಯಳ ತಂದ 3
ದುರುಳ ಹಿರಣ್ಯನ ಕರುಳುಬಗೆದು ತನ್ನ
ಕೊರಳೊಳಗಿಟ್ಟಾನಂದದಿಂದ 4
ಪುಟ್ಟನಾಗಿ ದಾನಕೊಟ್ಟ ಬಲಿಯ ತಲೆ
ಮೆಟ್ಟಿ ತುಳಿದ ಬಗೆಯಿಂದ 5
ಧಾತ್ರಿಯೊಳಗೆ ಮುನಿಪುತ್ರನಾಗಿ ಬಂದು
ಕ್ಷತ್ರಿಯರೆಲ್ಲರ ಕೊಂದ 6
ಮಡದಿಗಾಗಿ ತಾ ಕಡಲನೆ ಕಟ್ಟಿ
ಹಿಡಿದು ರಾವಣನ ಕೊಂದ 7
ಗೋಕುಲದೊಳು ಹುಟ್ಟಿ ಆಕಳ ಕಾಯ್ದ
ಶ್ರೀಕೃಷ್ಣನು ತಾ ಬಂದ 8
ಛಲದಲಿ ತ್ರಿಪುರರ ಸತಿಯರ ವ್ರತದ
ಫಲವನಳಿದ ಬಗೆಯಿಂದ 9
ಧರೆಯೊಳು ಪರಮ ನೀಚರ ಸವರಲು ಕು -
ದುರೆಯನೇರಿದ ಕಲಿ ಚೆಂದ 10
ದೋಷದೂರ ಶ್ರೀ ಪುರಂದರ ವಿಠಲ
ಪೋಷಿಪ ಭಕ್ತರ ವೃಂದ 11


No comments:

Post a Comment