Labels

Thursday, 6 February 2020

ಬಿಡುವೇನೇನಯ್ಯಾ ಹನುಮ


ಬಿಡುವೇನೇನಯ್ಯಾ ಹನುಮ ನಿನ್ನಬಿಡುವೇನೇನಯ್ಯಾ ಪ
ಬಿಡುವೆನೇನೋ ಹನುಮ ನಿನ್ನಅಡಿಗಳಿಗೆ ಶಿರವ ಕಟ್ಟಿ (ಎರಗುವೆ ನಾನು)ದೃಢ ಭಕ್ತಿ ಸುe್ಞÁನವನ್ನುತಡಮಾಡದಲೆ ಕೊಡುವೋ ತನಕ ಅ.ಪ
ಹಸ್ತವ ಮ್ಯಾಲಕೆ ಎತ್ತಿದರೇನುಹಾರಗಾಲ ಹಾಕಿದರೇನುಭೃತ್ಯನು ನಿನ್ನವನು ನಾನುಹಸ್ತಿ ವರದನ ತೋರೋ ತನಕ 1
ಹಲ್ಲು ಮುಡಿಯ ಕಟ್ಟಿದರೇನು ಗುಲ್ಲು ಮಾಡಿದರಂಜುವನಲ್ಲಫುಲ್ಲನಾಭ ಲಕುಮೀಲೋಲನಇಲ್ಲಿಗೆ ತಂದು ತೋರುವ ತನಕ 2
ಡೊಂಕು ಮೋರೆ ಬಾಲವ ತಿದ್ದಿಹುಂಕರಿಸಿದರೆ ಅಂಜುವನಲ್ಲಕಿಂಕರನು ನಿನ್ನವನೋ ನಾನುವೆಂಕಟವಿಠಲನ ತೋರುವ ತನಕ 3


ನಂಬಿದೆ ನಾ ನಿನ್ನ ಚರಣಕಮಲವನ್ನು



ನಂಬಿದೆ ನಾ ನಿನ್ನ ಚರಣಕಮಲವನ್ನು ವಿಜಯರಾಯ ಪ
ಬೆಂಬಿಡದೆಲೆ ವಿಷಯ ಹಂಬಲ ಬಿಡಿಸಯ್ಯ ವಿಜಯರಾಯ ಅ.ಪ
ತಾಯಿ ಎಳೆಯ ಶಿಶುವನು ಬಿಟ್ಟಿರುವುದುಂಟೆ ವಿಜಯರಾಯಬಾಯ ಬಿಡುವೆ ನಾ ಭವದಲ್ಲಿ ಸಿಗಬಿದ್ದು ವಿಜಯರಾಯನೋಯಲಾರೆನೂ ಎನ್ನ ಕಾಯೊ ಕರುಣದಿಂದ ವಿಜಯರಾಯಕಾಯ ಮನವು ನಿನ್ನ ಚರಣಕ್ಕೊಪ್ಪಿಸಿದೆನೊ ವಿಜಯರಾಯ 1
ಎತ್ತಗಾಣದೆ ಕರ್ಮ ಕತ್ತಲೆಯೊಳು ಸುತ್ತಿ ವಿಜಯರಾಯ ತತ್ತಳಗೊಳುತಿಪ್ಪೆ ಎತ್ತಿರೊ ಎನ್ನ ವಿಜಯರಾಯಪೆತ್ತ ತಂದೆಗೆ ಮಗ ಭಾರವಾಗುವುದುಂಟೆ ವಿಜಯರಾಯವಿತ್ತ ಭಾಗ್ಯವನೊಲ್ಲೆ ಎಂದೆಂದಿಗೂ ನಾನು ವಿಜಯರಾಯ 2
ತುಂಬಿದ ಭಂಡಾರ ಸಂಪತ್ತು ಎನಗೆಂದು ವಿಜಯರಾಯಹಂಬಲಿಸುತ ಬಲು ಸಂಭ್ರಮದಿರುತಿಪ್ಪೆ ವಿಜಯರಾಯಸಂಬಳಕಾರ ಶಿಷ್ಯ ನಿನಗಲ್ಲ ಕೇಳಯ್ಯ ವಿಜಯರಾಯಬಿಂಬ ಶ್ರೀ ವೆಂಕಟ ವಿಠ್ಠಲನ ತೋರೊ ನೀ ವಿಜಯರಾಯ 3


ಚೆಂದವೇನೇ ಗೋಪಿ


ಚೆಂದವೇನೇ ಗೋಪಿ ಚೆಂದವೇನೇನಿನ್ನ ಮಗನ ದುಡುಕು - ಚೆಂದವೇನೇ ಪ
ಚೆಂದದಿಂದಲಿ ಅರವಿಂದಾಕ್ಷ ಬೆಣ್ಣೆಯ ತಿಂದು ಬೇಗದಿ ಕೃಷ್ಣ ಬಂದೋಡಿ ನಿಂತನೆ 1
ಸದ್ದು ಮಾಡದೆ ಪಾಲು ಕದ್ದು ನಮ್ಮನೆಯೊಳಗಿದ್ದ ಸ್ತ್ರೀಯರನೆಲ್ಲ ಮುದ್ದಾಡಿ ಪೋದನೆ 2
ಚೋರನೆನಿಸಿಕೊಂಬ ಧೀರ ವೆಂಕಟವಿಠ್ಠಲ*ವಾರಿಜಾಕ್ಷನ ಪಾದ ಸೇರಿದೆ ನಾನೀಗ 3


ಗಣಪತೇ ಎನ್ನ ಪಾಲಿಸೋ - ಗಂಭೀರಾ ಪ


ಗಣೇಶ ಸ್ತೋತ್ರ
ಗಣಪತೇ ಎನ್ನ ಪಾಲಿಸೋ - ಗಂಭೀರಾ ಪ
ಪಾರ್ವತಿ ನಂದನ ಸುಂದರ ವದನಶರ್ವಾದಿ ಸುರವಂದ್ಯ ಶಿರಬಾಗುವೆನು 1
ಆದಿ ಪೂಜಿತ ನೀನು ಮೋದ ಭಕುತರಿಗಿತ್ತುಮಾಧವನಲಿ ಮನ ಸದಾ ನಿಲಿಸು ನೀ 2
ಪಂಕಜ ನಯನ ವೆಂಕಟ ವಿಠಲನಕಿಂಕಿರನೆನಿಸೆನ್ನ ಶಂಕರ ತನಯನೆ 3


ಏನು ಕಾರಣವೆನಗೆ



ಏನು ಕಾರಣವೆನಗೆ ತಿಳಿಯಲಿಲ್ಲದೀನ ರಕ್ಷಕನಾದ ಹರಿಯೆ ತಾ ಬಲ್ಲ ಪ
ಕಾನನದೊಳಗೆ ಕಡುತಪಿಸಿ ತೃಷಿಯಾದವಂಗೆತಾನಾಗೆ ಮೋಡೊಡ್ಡಿ ಮೇಘ ಕವಿದುನಾನು ಧನ್ಯನೆಂದು ನರ್ತಿಸುವ ಸಮಯದಲಿಕಾಣದೇ ಪೋಯಿತು ಬಿಂದು ಮಾತ್ರ 1
ವರುಷದಿಂದಲಿ ನಿಮ್ಮ ದರುಶನಾಕಾಂಕ್ಷಿಸಿಪರುಶರಾಮನ ಪಾದ ಭಜನೆಯನ್ನುಹರುಷದಲಿ ಪಾಡಿ ಹಗಲಿರುಳು ಪ್ರಾರ್ಥಿಸುವಂಗೆಪುರುಷಾರ್ಥ ಪೂರೈಸಿ ಬಾರದಿಪ್ಪ ಬಗಿಯು 2
ಅನ್ನಾದಿಯಿಂದ ಅನ್ನಂತ ಜನ್ಮದಿ ಬಂದುಉನ್ನಂತ ಮಾಡಿದ ಪಾಪರಾಶಿ-ಯನ್ನು ಉಣದನಕ ಭೂವನ್ನದೊಳು ಮತ್ತೆ ಪಾ-ವನ್ನರಾ ಪಾದಗಳು ಪಡೆಯಲರಿಯದೊಯೇನೊ 3
ಅನ್ನಾಥ ಬಂಧು ಹರೆಯೆನ್ನುವಾ ಬಿರುದಿಗೆನಿನ್ನಂಥ ಮಹಿಮನಾ ಕರೆದು ವೊಂದೂಎನ್ನಂಥ ಪರಮ ಪಾತಕಿಯನುದ್ಧರಿಸಿತಾ-ಸನ್ನಗೊಳಿಸಿ ಸತತ ಸಲಹದಿಹುದು ಏನು 4
ಅರಸಿನಾಲೋಚನಿಯು ಸತತ ಸನ್ನಿಧಿಯೊಳನು- ಸರಿಸಿದ ಆಳುಗಳು ಬಲ್ಲ ತೆರದಿಸರಸಿಜ ನಯನ ವೆಂಕಟ ವಿಠಲನ ಪಾದಸರಸಿಜದಿ ಸರಸರೊಳು ನಲಿದು ನೀ ಬಾರದಿಹುದು 5


ಎಂದು ಬರುವಳೋ ಗೋ-ವಿಂದನೊಲ್ಲಭೆ



ಎಂದು ಬರುವಳೋ ಗೋ-ವಿಂದನೊಲ್ಲಭೆ ಲಕ್ಷ್ಮೀ ರಂಗನ ಸನ್ನಿಧಿಗೆ ಪ
ಮಂಗಳಾಂಗಿ ಸರ್ವಾಂಗ ಬಳಲಿ ಮುಖಕಂದಿ ಕಳೆಗುಂದಿದಂತೆ | ಬಲು ವ್ಯಥೆಯಂತೆ ಅ.ಪ
ಶೇಷನ ಶಿಖಿ ಮ್ಯಾಲೆವಾಸುದೇವರು ಲಕ್ಷ್ಮೀ ಸಮೇತರಾಗಿರುತಿರಲುಆ ಸಮಯದಿ ಭೃಗುಮುನಿ ಬಂದು ಕೋ-ಪಿಸೆ ಸೋಕಿಸಿದನು ಪಾದವಾ | ವಕ್ಷ ಸ್ಥಳವಾ 1
ಥಟ್ಟನೆ ಇಳಿದಾಳುಸಿಟ್ಟಿನಿಂದಲಿ ಬಹು ಧಿಕ್ಕಾರ ಮಾಡಿದಳುಲಕ್ಷ್ಮೀರಮಣನೆಂಬೊ ಬಿರುದು ನಿಮಗೆ ಈಹೊತ್ತಿಗೆ ಅಲ್ಲೆಂದಾಳು | ತೆರಳಿದಳು 2
ನಿಲ್ಲದೆ ಪೊರಟಾಳುಫುಲ್ಲಾಕ್ಷಿ ಮನದೊಳು ತಲ್ಲಣಿಸುತಿರಲುವಲ್ಲಭನರಿಯದ ಸ್ಥಳವಿಲ್ಲದಿರೆ ತಾಯಿ ಕೊಲ್ಲಾಪುರಕೆ ಬಂದಾಳು | ನೆಲೆಗೊಂಡಾಳು 3
ಜಾತೆ ಬಾಮಾರನ ಮಾತೆ ಬಾ ವಾರಿಜದಳನೇತ್ರೆ ಬಾಮೂರ್ಲೋಕದೊಳಗೆ ನೀ ಪ್ರಖ್ಯಾತೆ ಬಾರೆಂದು ಶ್ರೀಮ-ನ್ನಾರಾಯಣನೆ ಕರೆಯಲು | ನಸುನಗೆಯೊಳು 4
ಜಯ ಲಕ್ಷ್ಮೀರಮಣಗೆಜಯ ಶ್ರೀನಿವಾಸಗೆ ಜಯ ಮೋಕ್ಷದಾಯಕಗೆಜಯತು ಕೊಲ್ಹಾಪುರದೊಳ್ ನೆಲಸಿದವಳಿಗೆಶ್ರೀದೇವಿಯಳಿಗೆ5
ವೆಂಕಟ ವಿಠಲವೈಕುಂಠಪತಿ ಲಕ್ಷ್ಮೀ ಶಾಂತ ಏಕಾಂತದೊಳುಶಂಖಚಕ್ರಧರ ಸರ್ವಮಂಗಳಕಾರಸಂಚಿತಾಗಮದೂರನು ಮಲಗಿರುವನು6


ಇದಿರ್ಯಾರೋ ಗುರುವೆ



ಇದಿರ್ಯಾರೋ ಗುರುವೆ ಸಮರ್ಯಾರೋ ಶ್ರೀ ಹಯವದನ ಪದ ಪ್ರಿಯ ವಾದಿರಾಜ ಪ
ಸಿರಿನಿಲಯನ ಗುಣಗಳ ಸ್ಮರಿಸುತಗುರು ಮಧ್ವ ಮುನಿಪನ ಮಹಿಮೆಯ ಪೊಗಳುತನೆರೆದಿದ್ದ ಮಾಯ್ಮದ ಕರಿಗಳ ಶಿರವನುಭರದಿ ಛೇದಿಪ ಬಲಿ ವಿಬುಧ ಕೇಸರಿಯೆ 1
ಹರಿ ತತ್ತ್ವ ಸಾರ ಸಜ್ಜನರಿಗೆ ತಿಳಿಯದೇಪರಿಪರಿ ಕುಸಮಯ ತಮ ಕವಿಯಲು ನೀಸರಸ ಭಾರತಿ ಮೊದಲಾದ ಗ್ರಂಥಗಳನುವಿರಚಿಸಿ ತಮ ಹರಿಸಿದ ದಿನಕರನೇ 2
ಸೋದೆಯ ಪುರದಲ್ಲಿರುವ ಹಯವದನನಮೋದದಿ ಭಜಿಸುತ ಈ ಧರೆಯೊಳ್ ಪೂರ್ಣಬೋಧ ತೀರ್ಥರ ಪಾದಸೇವಕರಿಗೆಆದರ ಮಾಳ್ಪ ಯತಿಕುಲ ಶಿರೋಮಣಿಯೇ 3
ಮುದ್ದು ಲಕ್ಷ್ಮೀಶ ವೆಂಕಟ ವಿಠ್ಠಲನಹೊದ್ದಿದ ಭಕ್ತರ ಸಂತಾಪ ಕಳೆಯುತ ಮಧ್ವಮುನಿಯ ಮತ ದುಗ್ಧವಾರಿಧಿಯೊಳುಉದ್ಭವಿಸಿದ ಪೂರ್ಣ ಶುದ್ಧ ಚಂದ್ರಮನೇ 4