Labels

Tuesday, 7 April 2020

ಜ್ಞಾನವಂತರಿಗೆ ವಿಧಿ ಕಾಡುವುದು jnanavantarige vidhi


ಜ್ಞಾನವಂತರಿಗೆ ವಿಧಿ ಕಾಡುವುದು ಸತ್ಯ ಅಜ್ಞಾನಿ ಮೂಢರಿಗೆ ಹರಿ ನಿನ್ನ ಬಲವಯ್ಯ \\ಪ\\
ಹಿಂದೆ ಹರಿಶ್ಚಂದ್ರನ ಅರಣ್ಯವನೆ ಸೇರಿಸಿತು ಮುಂದಾಗಿ ಕುಳಿತಿತ್ತು ಕರಿರಾಜಗೆ ||
ಚೆಂದದಲಿ ಪಾಂಡವರ ಅರಣ್ಯ ಸೇರಿಸಿತು ಸುಂದರಿಯ ಸೀತೆಯನು ಲಂಕೆಯೊಳಗಿಟ್ಟಿತು \\1\\
ಚಂದ್ರಂಗೆ ವಿಧಿ ಕಾಡಿ ಸರ್ಪ ತಾ ನುಂಗಿತು ಇಂದ್ರಂಗೆ ವಿಧಿ ಕಾಡಿ ಅಂಗ ಭಂಗವಾಯಿತು ||
ಚಂದ್ರಶೇಖರನನ್ನು ಸುಡಗಾಡ ಸೇರಿಸಿತು ಇಂದಿದನು ತಿಳಿದರೆ ನರರ ಪಾಡೇನು \\2\\
ವಿಧಿ ಕಾಡುವಾ ಕಾಲಕಿಲ್ಲದ್ದೆಲ್ಲವು ಬಂತು ವಿಧಿ ಕಳವು ಸುಳ್ಳು ಹಾದರ ಕಲಿಸಿತು ||
ವಿಧಿ ಬೇನೆ ಚಳಿಯುರಿಯ ರೋಗಂಗಳನೆ ತಂತು ವಿಧಿಯ ಗೆದ್ದವ ನಮ್ಮ ಪುರಂದರ ವಿಠಲ \\3\\


ಜೋ ಜೋ ಶ್ರೀ ಕೃಷ್ಣ ಪರಮಾನಂದ jo jo shree krishna paramaanda


ಜೋ ಜೋ ಶ್ರೀ ಕೃಷ್ಣ ಪರಮಾನಂದ ಜೋ ಜೋ ಗೋಪಿಯ ಕಂದ ಮುಕುಂದ \\ಪ.\\
ಪಾಲುಗಡಲೊಳು ಪವಡಿಸಿದವನೆ ಒಂದಾಲದೆಲೆಯ ಮೇಲೆ ಮಲಗಿದ ಶಿಶುವೇ ||
ಶ್ರೀ ಲತಾಂಗಿಯರ ಚಿತ್ತವಲ್ಲಭನೇ ಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋ ಜೋ\\ 1\\
ಹೊಳೆಯುವ ರನ್ನದ ತೊಟ್ಟಿಲ ಮೇಲೆ ಢಳಿ ಢಳಿಸುವ ಗುಲಗುಂಜಿಯ ಮಾಲೆ ||
ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲ ನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋ ಜೋ \\2\\
ಆರ ಕಂದ ನೀನಾರ ನಿಧಾನಿ ಆರ ರತ್ನವೊ ನೀನಾರ ಮಾಣಿಕವೋ ||
ಸೇರಿತು ಎನಗೊಂದು ಚಿಂತಾಮಣಿಯು ಎಂದು ಪೋರ ನಿನ್ನನು ಪಾಡಿ ತೂಗುವೆನಯ್ಯ - ಜೋ ಜೋ \\3\\
ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆ ಮನೆಯ ಕೆಲಸವಾರು ಮಾಡುವರಯ್ಯ ||
ಮನಸಿಗೆ ಸುಖನಿದ್ರೆ ತಂದುಕೊ ಬೇಗ ಫಣಿಶಯನನೆ ನಿನ್ನ ಪಾಡಿ ತೂಗುವೆನು - ಜೋ ಜೋ \\4\\
ಅಂಡಜವಾಹನ ಅನಂತ ಮಹಿಮ ಪುಂಡರೀಕಾಕ್ಷ - ಪರಮ ಪಾವನ ||
ಹಿಂಡು ದೈವದ ಗಂಡ ಉದ್ಧಂಢ ದೇವನ ಪಾಂಡುರಂಗ ಶ್ರೀ ಪುರಂದರವಿಠಲ ಜೋ ಜೋ \\5\\


ಜೋ ಜೋ ಯಶೋದೆಯ ನಂದ ಮುಕುಂದನೆ jo jo yashodeya nanda


ಜೋ ಜೋ ಯಶೋದೆಯ ನಂದ ಮುಕುಂದನೆಜೋ ಜೋ ಕಂಸಕುಠಾರಿ \\ಪ.\\
ಜೋ ಜೋ ಮುನಿಗಳ ಹೃದಯಾನಂದನೆಜೋ ಜೋ ಲಕುಮಿಯ ರಮಣ \\ಅಪ\\
ಹೊಕ್ಕುಳ ಹೂವಿನ ತಾವರೆಗಣ್ಣಿನಇಕ್ಕಿದ ಮಕರ ಕುಂಡಲದ
ಜಕ್ಕುಳಿಸುವ ಕದಪಿನ ಸುಳಿಗುರುಳಿನಚಿಕ್ಕ ಬಾಯ ಮುದ್ದು ಮೊಗದ ||
ಸೊಕ್ಕಿದ ಮದಕರಿಯಂದದಿ ನೊಸಲೊಳಗಿಕ್ಕಿದ ಕಸ್ತೂರಿ ತಿಲಕ |
ರಕ್ಕಸರೆದೆದಲ್ಲಣ ಮುರವೈರಿಯೆಮಕ್ಕಳ ಮಾಣಿಕ್ಯ ಜೋ ಜೋ \\1\\
ಕಣ್ಣ ಬೆಳಗು ಪಸರಿಸುತಿರೆ ಗೋಪಿ ಅರೆಗಣ್ಣ ಮುಚ್ಚಿ ನೋಡಿ ನಗುತ |
ಸಣ್ಣ ಬೆರಳುಗಳ ಬಾಯೊಳಗಳವಡಿಸಿಪನ್ನಗಶಯನ ತೊಟ್ಟಿಲಲಿ ||
ನಿನ್ನ ಮಗನ ಮುದ್ದ ನೋಡು ಎಂದೆನುತಲಿತನ್ನ ಪತಿಗೆ ತೋರಿದಳು |
ಹೊನ್ನ ಬಣ್ಣದ ಸೊಬಗಿನ ಖಣಿಯೆ ಹೊಸರನ್ನದ ಬೊಂಬೆಯೆ ಜೋ ಜೋ \\2\\
ನಿಡು ತೋಳ್ಗಳ ಪಸರಿಸುತಿರೆ ಗೋಪಿಯತೊಡೆಯ ಮೇಲ್ಮಲಗಿ ಬಾಯ್ದೆರೆಯೆ |
ಒಡಲೊಳಗೀರೇಳು ಭುವನವಿರಲು ಕಂಡುನಡುಗಿ ಕಂಗಳನು ಮುಚ್ಚಿದಳು ||
ಸಡಗರಿಸುತ ತಾನರಿಯದಂತೆಯೆಹೊಡೆ ಮರುಳಿ ಮೊಗವ ನೋಡುತಲಿ
ಕಡಲಶಯನ ಮೊಗವ ನೋಡುತಲಿಕಡಲಶಯನ ಶ್ರೀ ಪುರಂದರವಿಠಲನುಬಿಡದೆ ನಮ್ಮೆಲ್ಲರ ರಕ್ಷಿಸುವ 3


ಜಾಲಿಯ ಮರದಂತೆ ದುರ್ಜನರೆಲ್ಲ kaaliya maradante durjanerella


ಜಾಲಿಯ ಮರದಂತೆ  ದುರ್ಜನರೆಲ್ಲಜಾಲಿಯ ಮರದಂತೆ \\ಪ.\\
ಬಿಸಿಲಲಿ ಬಳಲಿ ಬಂದವರಿಗೆ ನೆರಳಿಲ್ಲಹಸಿದು ಬಂದವರಿಗೆ ಹಣ್ಣಿಲ್ಲವೊ
ಕುಸುಮವಾಸನೆಯಿಲ್ಲ ಕುಳ್ಳಿರಲು ಸ್ಥಳವಿಲ್ಲವಿಷಮರ ದುಸ್ಸಂಗ ಪಡೆದರೇನುಂಟು\\1\\
ಊರ ಹಂದಿಗೆ ಅಲಂಕಾರವ ಮಾಡಲುನಾರುವ ದುರ್ಗಂಧ ಬಿಡಬಲ್ಲುದೆ
ಸಾರ ತತ್ತ್ವಜ್ಞಾನ ಪಾಪಿಗೆ ಹೇಳಲುಕ್ರೂರಬುದ್ಧಿಯ ಬಿಟ್ಟು ಸಜ್ಜನವಪ್ಪಗೆ ?\\2\\
ತನ್ನಿಂದ ಉಪಕಾರ ತೊಟಕಾದರೂ ಇಲ್ಲಬಿನ್ನಣ ಮಾತುಗಳು ಮೊದಲೆ ಇಲ್ಲ
ಪನ್ನಗಶಯನ ಪುರಂದರವಿಠಲನಲ್ಲದೆಅನ್ಯದೈವಂಗಳ ಭಜಿಸದೆ ನರರು \\3\\


ಜಲದ ನೀಲ ಗಾತ್ರ ಏತರ ಚೆಲುವ jalada neela gaatra


ಜಲದ ನೀಲ ಗಾತ್ರ ಏತರ ಚೆಲುವ ರುಕ್ಮಿಣಿ ಬಿಳಿಯ ಜಡೆಯ ಮೈಯ ಜೋಗಿಗೊಲೆದ ಪಾರ್ವತಿ \\ಪ.\\
ಉದಕದೊಳಗೆ ವಾಸವೇಕೆ ಸದನವಿಲ್ಲವೆಸುದತಿ ಸುಡುವ ಕಾಡಿಗಿಂತ ಲೇಸು ಅಲ್ಲವೆ \\1\\
ಶೃಂಗಿಯ ಬೆನ್ನಿಲೆತ್ತಿದವನ ಸೊಗಸು ನೋಡಿದೆಗಂಗೆಯ ಶಿರದಿ ಪೊತ್ತವನ ಗುರುವ ಕೇಳಿದೆ \\2\\
ವಸುಧೆ ನೆಗಹಿ ಬೇರೆ ಮೆಲುವ ಅಶನವಿಲ್ಲವೆಹಸಿದು ವಿಷವ ಕುಡಿದ ಎಂತು ಸ್ವಾದವಲ್ಲವೆ \\3\\
ಕರುಳ ಕೊರಳ ಸರವು ಏಕೆ ಸರವು ದೊರಕದೆಕೊರಳ ರುಂಡಮಾಲೆ ಏಕೆ ಕಾಂಚನವಿಲ್ಲದೆ \\4\\
ಧರಣಿ ಮೂರಡಿ ಬೇಡಲಿಕ್ಕೆ ದೊರೆಯು ಅಲ್ಲವೆನರಕಪಾಲ ಪಿಡಿವ ಜಗದ ಕರ್ತೃವಲ್ಲವೆ \\5\\
ಮಾತೆಶಿರವ ಅಳಿದವನ ಮಾಲೆ ಕೇಳಿದೆಯಾತಾತನಾಚಿ ಸುತನ ಕೊಂದು ನೀತಿ ನೋಡಿದೆಯಾ \\6\\
ಕೋತಿಗಳನು ಕೂಡಲಿಕ್ಕೆ ಜಾತಿ ತನ್ನದೆಭೂತಗಣಗಳಾಳುವುದಕೆ ಭೀತಿ ಇಲ್ಲವೆ \\7\\
ಹತ್ತಿರಿದ್ದ ವಾಜಿಬಿಟ್ಟು ಹದ್ದನೇರ್ವರೆಎತ್ತಿನ ಬೆನ್ನ ನೇರಿದವರು ಉತ್ತಮರಾಹರೆ \\8\\
ಸುತ್ತಲಿದ್ದಬಾಲೆಯರೊಳು ಬತ್ತಲಿರುವರೆ ಶಾಪ ಹತ್ತಲಿಲ್ಲವೆ \\9\\
ಹರಿಹರರೊಳು ಭೇದವೇನು ಹೇಳೆ ರುಕ್ಮಿಣಿ ಪುರಂದರವಿಠಲ ತಾನೆ ಬಲ್ಲ ಕೇಳೆ ಪಾರ್ವತಿ \\10\\


ಜಯಮಂಗಳಂ ಲಕ್ಷ್ಮೀಪತಿ jayamanagalam laxmipati


ಜಯಮಂಗಳಂ ನಿತ್ಯ ಶುಭಮಂಗಳಂಜಯ ತುಂಗ ಲಕ್ಷ್ಮೀಪತಿ ನರಸಿಂಹಗೆ \\ಪ.\\
ಕಂದರ್ಪನಯ್ಯಗೆ ಕೋಟಿ ಲಾವಣ್ಯಗೆಮಂದರೋದ್ಧಾರ ಮಧುಸೂದನನಿಗೆ ||
ಕಂದ ಪ್ರಹ್ಲಾದನನು ಕಾಯ್ದ ದೇವನಿಗೆ ಶ್ರೀಇಂದಿರಾ ರಮಣ ಸರ್ವೋತ್ತಮನಿಗೆ \\1\\
ಕರಿರಾಜ ವರದನಿಗೆ ಕರುಣಾ ಸಮುದ್ರನಿಗೆಸರಸಿಜೋದ್ಭವ - ಭವವಂದ್ಯ ಹರಿಗೆ ||
ಗಿರಿಯರಸು ಕಾವೇರಿಪುರದ ರಂಗಯ್ಯಗೆಗಿರಿರಾಜಪತಿವಂದ್ಯ ಸುರರ ನಿಧಿಗೆ \\2\\
ಅಂಬರೀಷನ ಶಾಪ ಅಪಹರಿಸಿದವನಿಗೆತುಂಬುರ ನಾರದ ಮುನಿವಂದ್ಯಗೆ ||
ಕಂಬುಕಂಧರ ಪುರಂದರ ವಿಠಲರಾಯಗೆಅಂಬುಜನಾಭಗೆ ಅಜನಪಿತಗೆ \\3\\


ಜಯಜಯ ಶ್ರೀ ರಾಮ ನಮೋ


ಜಯಜಯ ಶ್ರೀ ರಾಮ ನಮೋಜಯ ಜಯ ಶ್ರೀ ಕೃಷ್ಣ ನಮೋ \\ಪ.\\
ಸಿರಿಯರಸನು ಶೃಂಗಾರವ ಮಾಡಿಸಿರಿಗಂಧವನೆ ಹಣೆಗಿಟ್ಟು ||
ತರುಣ ತುಳಸಿ ವನಮಾಲೆಯ ಧರಿಸಿಹರಿ ತುರುಕಾಯಲು ಹೊರಗೆ ಹೊರಟನು \\1\\
ಹೊತ್ತು ಹೋಯಿತು ತುರು ಬಿಡಿಯೆನ್ನುತ ಸಾತ್ತ್ವತ ನುಡಿದನು ಗೋಪಿಯೊಡನೆ ||
ತುತ್ತುರು ತುತ್ತುರು ತುರುತುರುಯೆನ್ನುತ ಒತ್ತಿ ಸ್ವರಗಳನು ಪೊಂಗೊಳಲೂದುತ \\2\\
ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿಒನಕೆಯಿಂದ ಓಗರ ಹದನೋಡಿ ||
ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡುವನಕೆ ಹೋಗಲೆಂದು ಹೊರಗೆ ಹೊರಟಳು \\3\\
ಹರಿಸ್ವರವೆನ್ನುತ ಒಬ್ಬಳು ಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||
ಒರಳು ಕೊಡುವಿರಾ ಅರಸಿನ ಅರೆದುಮರಳಿ ಬೇಗ ತಂದೀವೆನೆನುತಲಿ \\4\\
ಹಸುವಿಗೆ ಇಟ್ಟಲು ಹಾಲು ಓಗರಬಿಸಿಮಡ್ಡಿಯ ಗಂಡಗೆ ಚಾಚಿ ||
ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು \\5\\
ಗಿಳಿಗೆ ಹಾಸಿದಳು ಹಾಸು ಮಂಚವನುಅಳಿಯನ ಪಂಜರದೊಳಗಿರಿಸಿ ||
ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿಲೊಳಗೆ ಎಡೆಯನು ಮಾಡಿದಳೊಬ್ಬಳು \\6\\
ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||
ಕಟ್ಟಬಾಯಿಗೆ ಕಾಡಿಗೆ ಹಚ್ಚಿಕೃಷ್ಣನ ಸ್ಮರಿಸುತ ಹೊರಗೆ ಹೊರಟಳು \\7\\
ಅಂಗನೆ ಚೌರಿಯು ಕಾಲಿಗೆ ತಗುಲಿಸಿಮುಂಗೈಯಲಿ ತಾಳಿಯ ಬಿಗಿದು ||
ಸಿಂಗರ ಸರವನು ನಡುವಿಗೆ ಕಟ್ಟಿರಂಗನ ಸ್ಮರಿಸುತ ಹೊರಟಳೊಬ್ಬಳು \\8\\
ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆಗಟ್ಟಿ ಕಂಕಣವ ಕಿವಿಗಿಟ್ಟು ||
ತೊಟ್ಟಿಲೊಳಗೆ ಶಿಶು ಅಳುವುದ ಕಂಡುಕಟ್ಟಿದ ನೆಲುವನು ತೂಗಿದಳೊಬ್ಬಳು \\9\\
ತರುಣಿಯೊಬ್ಬ ಸಂನ್ಯಾಸಿಯ ಕಂಡುನೆರೆಮನೆ ಕೂಸೆಂದೆತ್ತ ಬರಲು ||
ಅರಿದಾವ ಗಾಳಿ ಸೋಕಿತೆನುತಲಿ ಪುರಂದರವಿಠಲನು ನಗುತಿದ್ದನು ಸಖಿ \\10\\